Blog

ಆಲೂರು ಗ್ಯಾರಂಟಿ ಸಮಿತಿ ಸಭೆ

ಆಲೂರು : ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ” ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ” ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷ ಪೃಥ್ವಿ ಜಯರಾಮ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ ಎಂ ರೇವಣ್ಣನವರ ಮಾರ್ಗದರ್ಶನದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪಂಚ ಗ್ಯಾರೆಂಟಿ ಯೋಜನೆಗಳನ್ನು ಶೇ. 98% ಫಲಾನುಭವಿಗಳು ಯೋಜನೆ ಪಡೆದು ಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಶೇ. 100 ರ ಪ್ರಗತಿ ಸಾಧಿಸಲಾಗುವುದು ಎಂದರು

ಯುವ ನಿಧಿ ಯೋಜನೆಯಡಿ ಆಲೂರು ತಾಲೂಕು ವ್ಯಾಪ್ತಿ 244 ಮಂದಿ ನಿರುದ್ಯೋಗಿ ಪದವೀಧರರು ನೋಂದಾಯಿಸಿದ್ದು, 135 ಮಂದಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಒಟ್ಟು 4 ಲಕ್ಷದ 500 ರೂಪಾಯಿ ಯುವನಿಧಿ ಫಲಾನುಭವಿಗಳಿಗೆ ಡಿಬಿಟಿ ಮುಖಾಂತರ ಹಣ ಸಂದಾಯವಾದೆ. ಯೋಜನೆಯಿಂದ ಹೊರಗೆ ಉಳಿದಿರುವವರಿಗೆ ಅನುಕೂಲ ವಾಗಲು ಹೆಚ್ಚು ಪ್ರಚಾರ ಮಾಡಬೇಕು. ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಸರ್ಕಾರದ ನಿರ್ದೇಶನದ ಪ್ರಕಾರ ಈಗಾಗಲೇ ವಿದ್ಯಾರ್ಥಿಗಳ ನೋಂದಣಿಗಾಗಿ ಪ್ರಚಾರ ಕಾರ್ಯಕ್ರಮಗಳು ನಡೆಯುತ್ತಿದ್ದು ಅಗತ್ಯವಿರುವ ಪೋಸ್ಟರ್, ಬ್ಯಾನರ್ ಗಳನ್ನು ಕಾಲೇಜು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರಚಾರ ಪಡಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹಲಕ್ಷ್ಮಿ ಯೋಜನೆ ಅಡಿ ಡಿಸೆಂಬರ್ ತಿಂಗಳಲ್ಲಿ 21,392 ಫಲಾನುಭವಿಗಳಿಗೆ 4 ಕೋಟಿ 27 ಲಕ್ಷ 84 ಸಾವಿರ ರೂಪಾಯಿ ಹಣ ಜಮಾವಣಿಯಾಗಿದೆ. ಯೋಜನೆಯ ಹೊರಗೆ ಉಳಿದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರ ಮನೆ ಬಾಗಿಲಿಗೆ ಅಧಿಕಾರಿಗಳು ಬೇಟ ನೀಡಿ ಯೋಜನೆಯ ಲಾಭ ದೊರಕಿಸಿ ಕೊಡುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ವಿತರಿಸುವ 5 ಕೆ ಜಿ ಅಕ್ಕಿಯ ಬದಲಾಗಿ ಪ್ರತಿ ಕೆ ಜಿ ಗೆ 34 ರೂಪಾಯಿಯಂತೆ ಕುಟುಂಬದ ಪ್ರತಿ ಸದಸ್ಯರಿಗೆ 170 ರೂ. ಹಣವನ್ನು ಪಡಿತರ ಚೀಟಿಯ ಸದಸ್ಯರ ಅನುಗುಣವಾಗಿ ಡಿ ಬಿ ಟಿ ಮುಖಾಂತರ ಹಣ ನೀಡುತ್ತಿದ್ದು, ತಾಲೂಕಿನಲ್ಲಿ ಒಟ್ಟು 22,606 ಅರ್ಹ ಪಡಿತರ ಚೀಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 1,15,000 ಗಿಂತ ಹೆಚ್ಚು ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ತಾಂತ್ರಿಕ ಕಾರಣಗಳಿಂದ ಕಳೆದ ತಿಂಗಳಿನಿಂದ ಓಟಿಪಿ ಸೌಲಭ್ಯವನ್ನು ನಿಲ್ಲಿಸಿದ್ದು ಓಟಿಪಿ ಸೌಲಭ್ಯ ಮತ್ತೆ ಪ್ರಾರಂಭ ಮಾಡುವಂತೆ ಸರ್ಕಾರಕ್ಕೆ ಸಮಿತಿ ಪರವಾಗಿ ಮನವಿ ಮಾಡಲಾಗುವುದು ಎಂದರು.

ಶಕ್ತಿ ಯೋಜನೆಯಡಿ ಆಲೂರು ತಾಲೂಕಿನಲ್ಲಿ ಪ್ರತ್ಯೇಕವಾದ ಕೆಎಸ್ಆರ್ಟಿಸಿ ಡಿಪೋ ಇರದ ಕಾರಣ ಹಾಸನದ ಎರಡು ಕೆ ಎಸ್ ಆರ್ ಟಿ ಸಿ ಡಿಪೋ ಗಳನ್ನು ಒಳಗೊಂಡಂತೆ ಒಟ್ಟು ಡಿಸೆಂಬರ್ ತಿಂಗಳಲ್ಲಿ 18,68,241 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 53,87,5240 ರೂಗಳ ಆದಾಯವಾಗಿದೆ.

ಗೃಹ ಜ್ಯೋತಿ ಯೋಜನೆ ಅಡಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದು ತಾಲೂಕಿನಲ್ಲಿ ನೋಂದಾಯಿಸಿಕೊಂಡಿರುವ ಒಟ್ಟು 23,481 ಅರ್ಹ ಫಲಾನುಭವಿಗಳಿಗೆ ಯೋಜನೆ ಅಡಿ ಡಿಸೆಂಬರ್ ತಿಂಗಳಲ್ಲಿ ಸರ್ಕಾರ 72,64,518 ರೂಗಳನ್ನು ಭರಿಸುತ್ತಿದೆ ಎಂದರು.

ಸಭೆಯ ನಂತರ ಯುವನಿಧಿ ಯೋಜನೆಯ ಪೋಸ್ಟರ್ ಮತ್ತು ಬ್ಯಾನರ್ ಗಳನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯಲ್ಲಿ ಬಿಡುಗಡೆ ಗೊಳಿಸಲಾಯಿತು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ದಯಾನಂದ್ ಮಾತನಾಡಿದರು, ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ರುದ್ರಕುಮಾರ್, ಯೋಗೇಶ್, ಶಿವೇ ಗೌಡ, ಯಾಕೂಬ್, ಶಿವಪ್ಪ, ರಂಗನಾಥ್, ಹೇಮಂತ್ ಕುಮಾರ್, ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎ ಟಿ ಮಲ್ಲೇಶ್, ಚೆಸ್ಕಾಂ ನ ವಿದ್ಯುತ್ ತಾಂತ್ರಿಕ ಇಂಜಿನಿಯರ್ ನಾಗವೇಣಿ, ಆಹಾರ ನಿರೀಕ್ಷಕ ಮೋಹನ್ ಕುಮಾರ್, ಕೆ ಎಸ್ಆರ್ ಟಿ ಸಿ ಬಸ್ ನಿಲ್ದಾಣದ ಸಂಚಾರ ನಿಯಂತ್ರಕ ಸಿದ್ದಯ್ಯ ಹಾಗೂ ಕೌಶಲ್ಯ ತರಬೇತಿ ಸಂಸ್ಥೆಯ ಅಧಿಕಾರಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿ ಅಶೋಕ್ ಇದ್ದರು.

Related posts

ಉಪ ನೋಂದಣಾಧಿಕಾರಿ ಅಜಯ್ ಕುಮಾರ್ ವರ್ಗಾವಣೆ

Bimba Prakashana

ಬಾಳ್ಳು ಪೇಟೆಯಲ್ಲಿ ಜಾಗ ಮಾರಾಟಕ್ಕಿದೆ

Bimba Prakashana

ಹೊಸ ವರ್ಷ ಆಚರಣೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More