Blog

10 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ವರದಿ ರಾಣಿ ಪ್ರಸನ್ನ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಅಭಿವೃದ್ಧಿ ಕಾರ್ಯ ಗಳಿಂದ ರಾಜ್ಯ ವಂಚಿತ ವಾಗುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದ್ದಾರೆ.

ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಬಾಳ್ಳುಪೇಟೆಯಿಂದ ಜಮ್ಮನಹಳ್ಳಿ (ಹೊಸಕೋಟೆ ಮಾರ್ಗ) – 10 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕುನ್ನಿಗನಹಳ್ಳಿ ಪಂಚಾಯಿತಿ ಜಮ್ಮನಹಳ್ಳಿ ಗ್ರಾಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ರಾಜ್ಯ ಹೆದ್ದಾರಿ-112ರ ಬಾಳ್ಳುಪೇಟೆ- ಜಮ್ಮನಹಳ್ಳಿ (ಕೆ.ಹೊಸ ಕೋಟೆ )ನೂತನ ರಸ್ತೆ ಕಾಮಗಾರಿಗೆ ಶನಿವಾರ ಬಾಳ್ಳುಪೇಟೆ ಮುಖ್ಯ ವೃತ್ತದಲ್ಲಿ ಭೂಮಿ ಪೂಜೆ ನಡೆಸಿ ಮಾತನಾಡಿ, ಸುಮಾರು 10 ಕೋಟಿ ರೂ. ವೆಚ್ಚದಲ್ಲಿ  3 ಕಿ.ಮೀ. ರಸ್ತೆಯನ್ನು ಈಗಿರುವ 57 ಮೀಟರ್ ನೂತನ ವಿಸ್ತರಣೆಯಾಗಲಿದೆ.

ರಸ್ತೆಯಿಂದ ಎರಡು ಬದಿಯಲ್ಲಿ ವಾಹನ ಸಂಚಾರ ಸುಗಮವಾಗಲಿದೆ ಎಂದು ಹೇಳಿದರು. ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಈ ರಸ್ತೆ ನಿರ್ಮಿಸಲಾಗುತ್ತಿದೆ. ಈ ರಸ್ತೆಯು ಬೇಲೂರು, ಕೊಡ್ಲಿಪೇಟೆ ಹಾಗೂ ಮಡಿಕೇರಿ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ.

ಈ ರಸ್ತೆ ಬಹಳ ವರ್ಷಗಳಿಂದ ಹೊಂಡ ಬಿದ್ದು ಅಭಿವೃದ್ಧಿ ಕಾಣದೆ ಹಾಳಾಗಿತ್ತು. ಇದರಿಂದ ಜನರ ಓಡಾಟಕ್ಕೆ ತೊಂದರೆಯಾಗಿತ್ತು ಎಂದು ಹೇಳಿದರು. ಇದರ ದುರಸ್ತಿಗೆ ಸಾರ್ವಜನಿಕರ ಒತ್ತಡವೂ ಹೆಚ್ಚಾಗಿತ್ತು. ಈ ಕಾರಣದಿಂದ ಜನತೆ ಬೇಡಿಕೆ ಅನುಗುಣವಾಗಿ ಮಳೆಗಾಲ ಆರಂಭವಾಗುವ ಮುನ್ನ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಯಾವುದೇ ದೂರುಗಳು ಬರದಂತೆ ಎಚ್ಚರವಹಿಸಬೇಕು ಎಂದು ಹೇಳಿದರು. ಸಂಪೂರ್ಣವಾಗಿ ಬಳಕೆಗೊಂಡು ಸುಸಜ್ಜಿತ ರಸ್ತೆ ನಿರ್ಮಾಣಗೊಳ್ಳಲಿದೆ.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ರಾಮದೂತ ಹಿಂದೂ ಮಹಾಗಣಪತಿ ಕಾರ್ಯಕ್ರಮದಲ್ಲಿ 270 ಯೂನಿಟ್ ರಕ್ತ ಸಂಗ್ರಹ

Bimba Prakashana

ಹಣ್ಣು ಹಂಪಲು ವಿತರಣೆ

Bimba Prakashana

ಕೆಂಪೇ ಗೌಡರ ಪ್ರತಿಮೆ ಅನಾವರಣ – ಪೂರ್ವಭಾವಿ ಸಭೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More